ಯೋಗಿ ಆಡಳಿತ ಇರುವವರೆಗೂ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲ: ಸಿದ್ದು

299

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ ಆಡಳಿತ ಇರುವ ತನಕ ಹೆಣ್ಮಕ್ಕಳಿಗೆ ಸುರಕ್ಷತೆಯಿಲ್ಲವೆಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ರು. ದಲಿತ ಯುವತಿಯ ಅತ್ಯಾಚಾರ ಪ್ರಕರಣದ ಹೊಣೆಯನ್ನ ಯೋಗಿ ಸರ್ಕಾರದ ಜೊತೆಗೆ ಪ್ರಧಾನಿ ಮೋದಿ, ಇವರನ್ನ ಬೆಂಬಲಿಸುವ ಸಂಘ ಪರಿವಾರ ಹೊತ್ತುಕೊಳ್ಳಬೇಕಾಗುತ್ತೆ ಎಂದಿದ್ದಾರೆ.

ಅತ್ಯಾಚಾರಕ್ಕೆ ಒಳಗಾಗಿ ಸಾವನ್ನಪ್ಪಿದ ಯುವತಿಗೆ ಗೌರವಪೂರ್ವ ಅಂತ್ಯಕ್ರಿಯೆಗೆ ಅವಕಾಶ ನೀಡದೆ, ಕುಟುಂಬಸ್ಥರನ್ನು ಕಣ್ಣೀರಿನಲ್ಲಿ ಕೈ ತೊಳೆಯುವಂತೆ ಮಾಡಲಾಗಿದೆ. ಯೋಗಿ ಆದಿತ್ಯನಾಥ ಕಾವಿಧಾರಿಗಳ ಪಾಲಿನ ಕಳಂಕ. ಕೂಡಲೇ ಅವರನ್ನ ಸಿಎಂ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!