ಪ್ರಜಾಸ್ತ್ರ ಸುದ್ದಿ
ನವದೆಹಲಿ: ಖ್ಯಾತ ಹಿಂದೂಸ್ತಾನಿ, ಶಾಸ್ತ್ರೀಯ ಸಂಗೀತಗಾರ ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಉಸ್ತಾದ್ ಗುಲಾಂ ಮುಸ್ತಪ್ ಖಾನ್ ನಿಧಾನರಾಗಿದ್ದಾರೆ. 89 ವರ್ಷದ ಗುಲಾಂ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ಸ್ವಗೃಹದಲ್ಲಿ ನಿಧನರಾಗಿದ್ದಾರೆ.
ಖ್ಯಾತ ಗಾಯಕರಾದ ಆಶಾ ಬೊಸ್ಲೆ, ಗೀತಾ ದತ್, ವಹೀದಾ ರೆಹಮಾನ್, ಹರಿಹರನ್, ಶಾನ್, ಸೋನು ನಿಗಮ್, ಎ.ಆರ್ ರೆಹಮಾನ್ ಸೇರಿದಂತೆ ಅನೇಕರಿಗೆ ಗುರವಿನ ಸ್ಥಾನದಲ್ಲಿದ್ರು. ಗುಲಾಂ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.
ಇವರು ಸಂಗೀತ ಕ್ಷೇತ್ರದಲ್ಲಿ ಸಲ್ಲಿಸಿದ ಗಣನೀಯ ಸೇವೆಗಾಗಿ ಪದ್ಮಶ್ರೀ, ಪದ್ಮಭೂಷಣ, ಪದ್ಮವಿಭೂಷಣ ಸೇರಿದಂತೆ ಅನೇಕ ಪ್ರಶಸ್ತಿಗಳು ಇವರ ಮುಡಿಗೆ ಏರಿವೆ.