‘ಉ.ಕ’ಕ್ಕೆ ಪರಿಹಾರ ವಿಳಂಬ: ಕೇಂದ್ರದ ವಿರುದ್ಧ ಬೃಹತ್ ಪ್ರತಿಭಟನೆ

355

ಬೆಂಗಳೂರು: ಪ್ರವಾಹದಿಂದ ಸಂಪೂರ್ಣವಾಗಿ ತತ್ತರಿಸಿ ಹೋಗಿರುವ ಉತ್ತರ ಕರ್ನಾಟಕ ಭಾಗಕ್ಕೆ ಪರಿಹಾರ ಘೋಷಣೆ ಮಾಡುವಲ್ಲಿ ಮೀನಾಮೇಷ ಎಣಿಸ್ತಿರುವ ಕೇಂದ್ರದ ವಿರುದ್ಧ ಪ್ರತಿಭಟನೆ ನಡೆಸಲಾಗ್ತಿದೆ.

ಉತ್ತರ ಕರ್ನಾಟಕ ಸಂಘ, ಸಂಸ್ಥೆಗಳ ಮಹಾ ಸಂಸ್ಥೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗ್ತಿದೆ. ಬೆಳಗ್ಗೆ 9.30ಕ್ಕೆ ರಾಜಾಜಿನಗರದ ಭಾಷ್ಯಂ ಸರ್ಕಲ್ ಬಳಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಲಾಗ್ತಿದೆ. ಅಲ್ಲಿಂದ ರಾಮಮಂದಿರ ಮಾರ್ಗವಾಗಿ ಫ್ರಿಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಸಲಾಗ್ತಿದೆ.

ಪ್ರವಾಹದಿಂದ ಉತ್ತರ ಕರ್ನಾಟಕ ಭಾಗದ ಜನರು ತಮ್ಮ ಇಡೀ ಬದುಕನ್ನ ಕಳೆದುಕೊಂಡು ಎರಡು ತಿಂಗಳು ಮೇಲಾಗ್ತಿದ್ರೂ, ಕೇಂದ್ರದಿಂದ ಪರಿಹಾರ ನೀಡುವ ಬಗ್ಗೆ ಒಂದೇ ಒಂದು ಮಾತು ಬರ್ತಿಲ್ಲ. ಇದನ್ನ ಖಂಡಿಸಿ ‘ಉತ್ತರ ಕರ್ನಾಟಕ ಉಳಿಸಿ’ ಬೃಹತ್ ಪ್ರತಿಭಟನೆ ನಡೆಸಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!