ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಎದುರಾಗಿದೆ. ಇದ್ರಿಂದಾಗಿ ಜನರು ಲಸಿಕೆ ಪಡೆದುಕೊಳ್ಳಲು ಕೇಂದ್ರಗಳ ಮುಂದೆ ಮುಗಿಬೀಳ್ತಿದ್ದಾರೆ. ಅಲ್ದೇ, ಕೇಂದ್ರದ ಸಿಬ್ಬಂದಿಯೊಂದಿಗೆ ಜಗಳವಾಡುತ್ತಿರುವ ದೃಶ್ಯಗಳು ಕಂಡು ಬಂದಿವೆ.
ಹುಬ್ಬಳ್ಳಿ, ಚಿಕ್ಕಮಗಳೂರು, ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಲಸಿಕೆ ಕೊರತೆ ಕಂಡು ಬಂದಿದೆ. ಆದ್ರೆ, ಆರೋಗ್ಯ ಸಚಿವ ಡಾ.ಕೆ ಸುಧಾಕರ ಅವರು ಲಸಿಕೆ ಕೊರತೆ ಇಲ್ಲ ಎನ್ನುತ್ತಾರೆ. ಆದ್ರೆ, ವಾಸ್ತವ ಬೇರೆನೇ ಇದೆ. ಇದ್ರಿಂದಾಗಿ ವಿರೋಧ ಪಕ್ಷಗಳು ಹಾಗೂ ಸಾರ್ವಜನಿಕರು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.