ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಮೊದಲ ಪುಣ್ಯತಿಥಿಯನ್ನ ಮಾಡಲಾಯ್ತು. ಇಂದು ಬೆಳಗ್ಗೆ ಬಿಜೆಪಿ ಪಕ್ಷದ ವತಿಯಿಂದ ಅವರಿಗೆ ಗೌರವ ಸಲ್ಲಿಸಲಾಯ್ತು.
ರಾಷ್ಟ್ರಪತಿ ರಾಮನಾಥ ಕೋವಿಂದ, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ ಶಾ, ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ, ಜೆಪಿ ನಡ್ಡಾ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ‘ಸದೈವ್ ಅಟಲ್’ ಸ್ಮಾರಕಕ್ಕೆ ಭೇಟಿ ನೀಡಿ ಗೌರವ ಸಲ್ಲಿಸಿದ್ರು.
ಇನ್ನು ವಾಜಪೇಯಿ ಸಹೋದರಿ ಮತ್ತು ಅವರ ಮಗಳು ಸೇರಿದಂತೆ ಕುಟುಂಬ ವರ್ಗ ಭಾಗವಹಿಸಿ, ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದ್ರು.