ಮೈಸೂರು: ವಿಶ್ವಪ್ರಸಿದ್ಧ ದಸರಾ ಸಂಭ್ರಮದ ಹಿನ್ನೆಲೆಯಲ್ಲಿ ನಡೆಯುವ ವನ್ಯಜೀವಿ ಸಪ್ತಾಹಕ್ಕೆ ಚಾಲನೆ ನೀಡಲಾಗಿದೆ. ಅರಮನೆಯ ಬಲರಾಮ ದ್ವಾರದ ಬಳಿ ನ್ಯಾಯಾಧೀಶರಾದ ದೇವ ಮಾನೆಯವರು 65ನೇ ವನ್ಯಜೀವಿ ಸಪ್ತಾಹಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದ್ರು.
ವನ್ಯಜೀವಿಗಳ ರಕ್ಷಣೆ ಹಾಗೂ ಅವುಗಳ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮವಾಗಿದೆ. ಇಂದಿನಿಂದ 7 ದಿನಗಳ ಕಾಲ ಈ ಸಪ್ತಾಹ ನಡೆಯಲಿದೆ. ಇದಕ್ಕೆ ದಸರಾ ಗಜಪಡೆ ಸಾಥ್ ನೀಡಲಿದೆ. ವಿಜಯದಶಮಿ ದಿನ ನಡೆಯುವ ಜಂಬೂ ಸವಾರಿ ದಿನ, ಮೆರವಣಿಗೆಯಲ್ಲಿ ಶಾಲಾ ಮಕ್ಕಳು, ಅರಣ್ಯ ಅಧಿಕಾರಿಗಳು ಭಾಗವಹಿಸಲಿದ್ದಾರೆ.