ಪ್ರಜಾಸ್ತ್ರ ಸುದ್ದಿ
ವಾರಣಾಸಿ: ಇಲ್ಲಿನ ಜ್ಞಾನವಾಪಿ ಮಸೀದಿಯ ನೆಲಮಾಳಿಗೆಯಲ್ಲಿ ಪೂಜಿಸುವ ಹಕ್ಕು ಅರ್ಚಕರ ಕುಟುಂಬಕ್ಕಿದೆ ಎಂದು ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿದೆ ಎಂದು, ವಕೀಲ ಮದನ್ ಮೋಹನ್ ತಿಳಿಸಿದ್ದಾರೆ.
ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಕಾಶಿ ವಿಶ್ವನಾಥ ಟ್ರಸ್ಟ್ ವತಿಯಿಂದ ಪೂಜೆ ಮಾಡಲು ಜಿಲ್ಲಾಡಳಿತದಿಂದ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಅಧಿಕಾರಿಗಳು ನೆಲಮಾಳಿಗೆ ಮುಚ್ಚುವ ತನಕ, ಅಂದರೆ 1993ರವರೆಗೆ ಅಲ್ಲಿ ಪೂಜೆ ಸಲ್ಲಿಸಲಾಗುತ್ತಿತ್ತು ಎಂದು ಹಿಂದೂ ಪರ ವಕೀಲ ಮದನ್ ಮೋಹನ್ ವಾದ ಮಂಡಿಸಿದ್ದಾರೆ.