ಪ್ರಜಾಸ್ತ್ರ ಸುದ್ದಿ
ವಾರಣಾಸಿ: ಬಿಸಿಸಿಐ ವತಿಯಿಂದ ಉತ್ತರ ಪ್ರದೇಶದ ವಾರಣಾಸಿಯಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ಅನ್ನು ಪ್ರಧಾನಿ ಮೋದಿ ಶಂಕುಸ್ಥಾಪನೆ ಮಾಡಿದ್ದಾರೆ. ಶನಿವಾರ ಪ್ರಧಾನಿ ಮೋದಿ ಅವರು ಕ್ರಿಕೆಟ್ ಮೈದಾನ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದ್ದಾರೆ.
ನಂತರ ಮಾತನಾಡಿದ ಪ್ರಧಾನಿ ಮೋದಿ, ಮಹಾದೇವ ನಗರದಲ್ಲಿ ಶಿವ ಥೀಮ್ ನಲ್ಲಿ ಮಾಡಲಾಗುತ್ತಿದೆ. ಈ ಮೂಲಕ ಮಹಾದೇವನಿಗೆ ಅರ್ಪಿಸಲಾಗುತ್ತಿದೆ ಎಂದರು. ಇದರಿಂದ ಸ್ಥಳೀಯವಾಗಿ ಆರ್ಥಿಕತೆಗೆ ಶಕ್ತಿ ತುಂಬಿದಂತಾಗುತ್ತೆ ಎಂದಿದ್ದಾರೆ. ಈ ವೇಳೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿ ಅನೇಕರು ಉಪಸ್ಥಿತರಿದ್ದರು.