ವರ್ತೂರು ಸಂತೋಷಗೆ ಜಾಮೀನು

266

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಹುಲಿ ಉಗುರು ಇರುವ ಪೆಂಡೆಂಟ್ ಧರಿಸಿರುವ ಸಂಬಂಧ ಬಂಧನಕ್ಕೆ ಒಳಗಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. 2ನೇ ಎಸಿಜೆಎಂ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ.

ಬಿಗ್ ಬಾಸ್ ಮನೆಯೊಳಗೆ ಇರುವಾಗಲೇ ಸಂತೋಷನನ್ನು ಬಂಧಿಸಲಾಗಿದೆ. ಇದಾದ ಬಳಿಕ ಸಿನಿಮಾ ನಟರು, ರಾಜಕೀಯ ನಾಯಕರ ಮಕ್ಕಳು ಸಹ ಹುಲಿ ಉಗುರಿನ ಗುರುತು ಇರುವ ಪೆಂಡೆಂಟ್ ಧರಿಸಿರುವ ಫೋಟೋ ವೈರಲ್ ಆಗಿವೆ. ಇವರಿಗೆ ನೋಟಿಸ್ ಕೊಡಲಾಗಿದೆ. ಸಂತೋಷನನ್ನು ಬಂಧಿಸಲಾಗಿದೆ. ನನ್ನ ಕಕ್ಷಿದಾರರನ್ನು ವೀರಪ್ಪನ್ ರೀತಿ ನೋಡಿಕೊಳ್ಳಲಾಗಿದೆ ಎಂದು ವಕೀಲರು ವಾದ ಮಂಡಿಸಿದರು.

ಗುರುವಾರ ವಿಚಾರಣೆ ನಡೆಸಿದ್ದ ಕೋರ್ಟ್ ಇಂದು ಜಾಮೀನು ಮಂಜೂರು ಮಾಡಿದೆ. 2 ಸಾವಿರ ಭದ್ರತಾ ನಗದು, ಒಬ್ಬರನ್ನು ಶ್ಯೂರಿಟಿ ನೀಡುವಂತೆ ಸೂಚಿಸಿದೆ.




Leave a Reply

Your email address will not be published. Required fields are marked *

error: Content is protected !!