ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಸಾಕಷ್ಟು ಕುತೂಹಲ ಮೂಡಿಸಿದ್ದ ವರುಣಾದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ವಿ.ಸೋಮಣ್ಣ ಎದುರು ಭಾರೀ ಗೆಲುವು ಸಾಧಿಸುವ ಮೂಲಕ ಎಲ್ಲದಕ್ಕೂ ಉತ್ತರ ಸಿಕ್ಕಿದೆ.
ಇನ್ನು ಅಥಣಿಯಲ್ಲಿ ಲಕ್ಷ್ಮಣ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬಿಜೆಪಿಯಿಂದ ಮಹೇಶ್ ಕುಮಟಹಳ್ಳಿ ಸ್ಪರ್ಧಿಸಿದ್ದರು. ಈ ಮೂಲಕ ಬಿಜೆಪಿಗೆ ಸೆಡ್ಡು ಹೊಡೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ಸವದಿ ಗೆಲ್ಲುವುದರೊಂದಿಗೆ ಮೋದಿ, ಅಮಿತ್ ಶಾ ಅವರಿಗೆ ಭಾರೀ ಮುಖಭಂಗವಾಗಿದೆ.