Search

ಹೆಚ್ಚಾಗುತ್ತಿದೆ ಬಿಸಿಲು.. ಏನಂತಾರೆ ವೈದ್ಯರು?

441

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲು ಹೆಚ್ಚಾಗುತ್ತಿದೆ. ಅದರಲ್ಲೂ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಇದರಿಂದಾಗಿ ನಿರ್ಜಲೀಕರಣ ಸಮಸ್ಯೆ ಎದುರಾಗುತ್ತದೆ. ಇದರಿಂದಾಗಿ ಜ್ವರ, ಹೊಟ್ಟೆ ನೋವು, ವಾಂತಿ ಕಾಣಿಸಿಕೊಳ್ಳುತ್ತೆ ಅಂತಾರೆ ವೈದ್ಯರು.

ಬೇಸಿಗೆಯಲ್ಲಿ ಯುಟಿಐ(ಮೂತ್ರ ಸೋಂಕು) ಸಾಮಾನ್ಯವಾಗಿ ಕಾಣಿಸಿಕೊಳ್ಳುತ್ತೆ. ದೆಹಲಿ ನಿರ್ಜಲೀಕರಣಗೊಂದು ಕಡಿಮೆ ಪ್ರಮಾಣದಲ್ಲಿ ಮೂತ್ರ ವಿಸರ್ಜನೆಯಾಗುವುದರಿಂದ ಈ ಸಮಸ್ಯೆ ಕಾಣಿಸಿಕೊಳ್ಳುತ್ತೆ. ಹೀಗಾಗಿ ಹೆಚ್ಚೆಚ್ಚು ನೀರು ಕುಡಿಯುವುದು ಒಳ್ಳೆಯದು.

ಇನ್ನು ಮಕ್ಕಳಿಗೆ ಶುದ್ಧ ಕುಡಿಯುವ ನೀರು, ಹಣ್ಣುಗಳನ್ನು ನೀಡಬೇಕು. ಇನ್ನು ಮಕ್ಕಳು ಹೊರಗಡೆ ಆಟವಾಡುವ ಚಟುವಟಿಕೆಗಳು ಬೆಳಗ್ಗೆ 11 ಗಂಟೆಯೊಳಗೆ ಇರಲಿ. ಸಂಜೆ 4 ಗಂಟೆಯ ನಂತರ ಇರಲಿ. ಮೆದುವಾದ ಹತ್ತಿ ಬಟ್ಟೆಗಳನ್ನು ಧರಿಸುವುದು, ಅವರ ಬಗ್ಗೆ ಕಾಳಜಿ ವಹಿಸುವುದು ಮುಖ್ಯವಾಗಿದೆ ಎಂದು ವೈದ್ಯರು ಹೇಳುತ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!