ಪ್ರಜಾಸ್ತ್ರ ಸುದ್ದಿ
ಚೆನ್ನೈ: ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಾಗಿ ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ವಿಶ್ವ ಹಿಂದೂ ಪರಿಷತ್ ಮಾಜಿ ಮುಖಂಡನನ್ನು ಗುರುವಾರ ಮುಂಜಾನೆ ಬಂಧಿಸಲಾಗಿದೆ.
ಆರ್.ಬಿ.ವಿ.ಎಸ್ ಮಣಿಯನ್ ಎಂಬುವರನ್ನು ಮಾಂಬಲಂ ಪೊಲೀಸರು ಬಂದಿಸಿದ್ದಾರೆ. ಸಂವಿಧಾನ ರಚನೆಯಲ್ಲಿ ಅಂಬೇಡ್ಕರ್ ಕೊಡುಗೆ ಏನೂ ಇಲ್ಲ. ರಾಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ 300 ಸದಸ್ಯರು ಸಿದ್ಧಪಡಿಸಿ ಅಂತಿಮಗೊಳಿಸಿದ್ದಾರೆ ಎಂದು ಹೇಳಿದ ಆರೋಪ ಕೇಳಿ ಬಂದಿದೆ.
ಎಸ್ಸಿ, ಎಸ್ಟಿ ಕಾಯ್ದೆ ಅಡಿಯಲ್ಲಿ ಮಣಿಯನ್ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಡಿಯೋ ಕುರಿತು ತನಿಖೆ ನಡೆಸಲಾಗುತ್ತಿದೆ.