ವಿಶಾಖಪಟ್ಟಣಂ: ಉಪ ರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಪಾಕಿಸ್ತಾನಕ್ಕೆ ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ನಾವು ಯಾವ ರಾಷ್ಟ್ರದ ಮೇಲೂ ಮೊದ್ಲು ದಾಳಿ ಮಾಡಿಲ್ಲ. ನಮ್ಮ ಮೇಲೆ ದಾಳಿ ಮಾಡಿದ್ರೆ ನಾವು ಸುಮ್ಮನೆ ಬಿಡುವುದಿಲ್ಲ ಎಂದಿದ್ದಾರೆ.
ನಾವು ಯಾರ ಮೇಲೂ ದಾಳಿ ಮಾಡಿಲ್ಲ. ಒಂದು ವೇಳೆ ನಮ್ಮ ಮೇಲೆ ದಾಳಿ ಮಾಡಿದವರು, ಅವರ ಜೀವನಪೂರ್ತಿ ಮರೆಯಬಾರದು ಹಾಗೇ ತಿರುಗೇಟು ನೀಡುತ್ತೇವೆ ಎಂದು ವಿಶಾಖಪಟ್ಟಣಂನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ್ನಾಡಿದ್ರು. ಇದು ಪರೋಕ್ಷವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದಂತಾಗಿದೆ.