ಯತೀಂದ್ರ ಮಾತಿನ ವಿಡಿಯೋ.. ಇದೇ ಸಾಕ್ಷಿ ಎಂದ ಕುಮಾರಸ್ವಾಮಿ

93

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಶಾಸಕ, ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ತಂದೆಯೊಂದಿಗೆ ಮಾತನಾಡುವ ವಿಡಿಯೋ ವೈರಲ್ ಆಗಿದೆ. ಸಾರ್ವಜನಿಕವಾಗಿಯೇ ಯತೀಂದ್ರ ಮಾತನಾಡಿದ್ದು, ಇದು ರಾಜಕೀಯ ಸ್ವರೂಪ ಪಡೆದಿದೆ. ಇದೇ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಎಕ್ಸ್ ನಲ್ಲಿ ಕಿಡಿ ಕಾರಿದ್ದಾರೆ.

71 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಯನ್ನು ಸರ್ಕಾರ ಮಾಡಿದೆ. ಇದರಲ್ಲಿ ಯತೀಂದ್ರ ಹೇಳಿರುವ ವಿವೇಕಾನಂದ ಎಂಬುವವರನ್ನು ಮೈಸೂರಿನ ವಿ.ವಿ ಪುರಂ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗಾಗಿ ಯತೀಂದ್ರ ಹೇಳಿದ ಹೆಸರಿಗೂ ಇದಕ್ಕೂ ಸಂಬಂಧವಿದೆ ಎನ್ನುವ ರೀತಿಯಲ್ಲಿ ವಾಗ್ದಾಳಿ ನಡೆಸಲಾಗಿದೆ.

ಅಬ್ಬಬ್ಬಾ.. ಬಾಯಿ ತೆರೆದರೆ ಭಗವದ್ಗೀತೆ! ನಾಲಿಗೆ ಮೇಲೆ ನೈತಿಕತೆಯ ನಾಟ್ಯ!! ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಂಥನ!! ಕೊನೆಗೂ, ಝಣ ಝಣ ಕಾಂಚಾಣ… ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ! ಥೂ ನಾಚಿಕೆ ಆಗಬೇಕು ಎನ್ನುವ ಮೂಲಕ ಸರಣಿ ಪೋಸ್ಟ್ ಗಳನ್ನು ಹಾಕಿ ಕಿಡಿ ಕಾರಿದ್ದಾರೆ.




Leave a Reply

Your email address will not be published. Required fields are marked *

error: Content is protected !!