ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಾಕಷ್ಟು ಪರ-ವಿರೋಧ, ಚರ್ಚೆಯ ನಡುವೆ ಕೊನೆಗೂ ವಿದ್ಯಾಗಮ ಯೋಜನೆಯನ್ನ ಸ್ಥಗಿತಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಅನ್ನೋದು ತಿಳಿದು ಬಂದಿದೆ. ಶಿಕ್ಷಣ ಸಚಿವ ಸುರೇಶಕುಮಾರ ಅವರು ವಿದ್ಯಾಗಮ ಸ್ಥಗಿತಕ್ಕೆ ನಿರ್ದೇಶನ ನೀಡಿದ್ದಾರೆ.
ವಿದ್ಯಾಗಮ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡಲು ತೆರಳಿದ್ದ ರಾಜ್ಯದ ವಿವಿಧ ಪ್ರದೇಶಗಳಲ್ಲಿ, 100ಕ್ಕೂ ಹೆಚ್ಚು ಶಿಕ್ಷಕರು ಕೋವಿಡ್ 19 ಸೋಂಕಿಗೆ ಬಲಿಯಾಗಿದ್ದಾರೆ ಅನ್ನೋ ಕಾರಣಕ್ಕೆ, ತೀವ್ರ ವಿರೋಧ ವ್ಯಕ್ತವಾಯ್ತು. ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ರು.
ಇದೀಗ ಶಿಕ್ಷಣ ಸಚಿವರು, ವಿದ್ಯಾಗಮ ಯೋಜನೆ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ನಿರ್ದೇಶನ ನೀಡಿದ್ದಾರೆ. ಜಿಲ್ಲಾವಾರು ವರದಿ ಬರುವ ತನಕ ತಾತ್ಕಾಲಿಕವಾಗಿ ನಿಲ್ಲಿಸಲು ಸೂಚಿಸಲಾಗಿದೆ.