ವಿಜಯನಗರ ಜಿಲ್ಲೆ ಉದ್ಘಾಟನೆಗೆ ಕ್ಷಣಗಣನೆ

207

ಪ್ರಜಾಸ್ತ್ರ ಸುದ್ದಿ

ವಿಜಯನಗರ: ರಾಜ್ಯದ 31ನೇ ಜಿಲ್ಲೆಯಾಗಿ ವಿಜಯನಗರ ಅನಾವರಣಗೊಂಡಿದೆ. ಅದರ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೆರವೇರಿಸಲಿದ್ದು, ಆ ಸಮಯಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ.

ಬಳ್ಳಾರಿ ಜಿಲ್ಲೆಯೊಂದಿಗೆ ಬೆಸೆದುಕೊಂಡಿದ್ದ ವಿಜಯನಗರ ಇಂದಿನಿಂದ ನೂತನ ಜಿಲ್ಲೆ. 6 ತಾಲೂಕುಗಳು ಕೂಡಿಕೊಂಡ ಹೊಸ ಜಿಲ್ಲೆ ಉದಯವಾಗಿದೆ. ಹಂಪಿಯ ಗತವೈಭವ ಸಾರುವ ಮಾದರಿಯಲ್ಲಿ ವೇದಿಕೆ ಸಿದ್ಧಗೊಂಡಿದ್ದು, ಸಿಎಂ ಚಾಲನೆ ನೀಡಲಿದ್ದಾರೆ. ಇದಕ್ಕೆ ಅನೇಕ ಗಣ್ಯಾತಿಗಣ್ಯರು ಸಾಕ್ಷಿಯಾಗಲಿದ್ದಾರೆ.




Leave a Reply

Your email address will not be published. Required fields are marked *

error: Content is protected !!