ವಿಜಯಪುರ ವಿಮಾನ ನಿಲ್ದಾಣಕ್ಕೆ ಬಸವೇಶ್ವರರ ಹೆಸರು

392

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಗುಮ್ಮಟನಗರಿ ವಿಜಯಪುರದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬಸವೇಶ್ವರ ಅವರ ಹೆಸರು ಇಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ನೂತನ ವಿಮಾನ ನಿಲ್ದಾಣಕ್ಕೆ ಯಾರ ಹೆಸರು ಇಡಬೇಕು ಅನ್ನೋದರ ಕುರಿತು ಹಲವು ಚರ್ಚೆಗಳು ನಡೆದಿದ್ದವು. ಸಾರ್ವಜನಿಕರು ಸಹ ಹಲವು ಹೆಸರಗಳನ್ನು ಸಲಹೆ ನೀಡಿದ್ದರು. ಇದೀಗ ಸಚಿವ ಸಂಪುಟ ಸಭೆಯಲ್ಲಿ ಬಸವಣ್ಣನವರ ಹೆಸರಿಗೆ ಒಪ್ಪಿಗೆ ನೀಡಲಾಗಿದೆ.




Leave a Reply

Your email address will not be published. Required fields are marked *

error: Content is protected !!