ಪ್ರಜಾಸ್ತ್ರ ಸುದ್ದಿ
ವಿಜಯಪುರ: ವಿಜಯಪುರ ಲೋಕಸಭಾ (ಎಸ್ಸಿ ಮೀಸಲು ಕ್ಷೇತ್ರ) ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಇಂದು ನಾಮಪತ್ರ ಸಲ್ಲಿಸಿದರು. ಸಂಸದ ಉಮೇಶ ಜಾಧವ, ಶಾಸಕ ಯತ್ನಾಳ, ಜೆಡಿಎಸ್ ಶಾಸಕ ರಾಜುಗೌಡ, ಮಾಜಿ ಶಾಸಕ ಸಿ.ಟಿ ರವಿ, ಜಿಲ್ಲಾಧ್ಯಕ್ಷ ಆರ್.ಎಸ್ ಪಾಟೀಲ ಕೂಚಬಾಳ ಸೇರಿ ಅನೇಕರು ಸಾಥ್ ನೀಡಿದರು.
ಮಧುಲಾ ಮಾರುತಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಮೆರವಣಿಗೆ ನಡೆಸಲಾಯಿತು. ನಗರದ ಪ್ರಮುಖ ಬೀದಿಗಳಲ್ಲಿ ಬೃಹತ್ ರೋಡ್ ಶೋ ಮಾಡುವ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಲಾಯಿತು.
ಮೆರವಣಿಗೆ ವೇಳೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು. ಇದೆ ವೇಳೆ ಚುನಾವಣೆಯ ಪ್ರಣಾಳಿಕೆಯನ್ನು ಪಕ್ಷದ ನಾಯಕರು ಬಿಡುಗಡೆ ಮಾಡಿದರು. ನಂತರ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಟಿ.ಭೂಬಾಲನ್ ಅವರಿಗೆ ನಾಮಪತ್ರ ಸಲ್ಲಿಸಿದರು.