ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮಹಾನಗರ ಪಾಲಿಕೆಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸಿದೆ. ಬಹುಮತ ಹೊಂದಿದ್ದರೂ ಚುನಾವಣೆ ಬಹಿಷ್ಕಾರದಿಂದಾಗಿ ಬಿಜೆಪಿಗೆ ಸೋಲಾಗಿದೆ.
ಮೇಯರ್ ಸ್ಥಾನ ಸಾಮಾನ್ಯ ವರ್ಗ ಮೀಸಲಿತ್ತು. 34ನೇ ವಾರ್ಡ್ ಸದಸ್ಯೆ ಮಹೆಜಬೀನ್ ಹೊರ್ತಿ 22 ಮತಗಳೊಂದಿಗೆ ಆಯ್ಕೆ ಆಗಿದ್ದಾರೆ. ಉಪ ಮೇಯರ್ ಸ್ಥಾನ ಎಸ್ಟಿ ಮೀಸಲಾಗಿತ್ತು. 18ನೇ ವಾರ್ಡ್ ಸದಸ್ಯ ದಿನೇಶ ಹಳ್ಳಿ ಆಯ್ಕೆ ಆಗಿದ್ದಾರೆ. ಮೇಯರ್ ಸ್ಥಾನಕ್ಕೆ 12ನೇ ವಾರ್ಡಿನ ಬಿಜೆಪಿ ಸದಸ್ಯೆ ರಶ್ಮಿ ಕೋರಿ ನಾಮಪತ್ರ ಸಲ್ಲಿಸಿದ್ದರು.
ಬಿಜೆಪಿ ಪಾಲಿಕೆಯಲ್ಲಿ 16 ಸ್ಥಾನಗಳನ್ನು ಹೊಂದಿದೆ. ಆದರೆ, ಇವರು ಹಾಗೂ ಶಾಸಕ ಬಸನಗೌಡ ಪಾಟೀಲ ಯತ್ನಾಳ ಚುನಾವಣೆ ಬಹಿಷ್ಕರಿಸಿದ್ದರಿಂದ, ಇತರೆ ಪಕ್ಷಗಳ ಸಹಾಯದಿಂದ ಕಾಂಗ್ರೆಸ್ ಗೆಲುವು ಸಾಧಿಸಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ ಸಂತೋಷ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ.