ಪ್ರಜಾಸ್ತ್ರ ಸುದ್ದಿ
ಧಾರವಾಡ: ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಅಧಿಕಾರ ವಹಿಸಿಕೊಳ್ಳಲು ಹೊರಟಿದ್ದ ಸಂದರ್ಭದಲ್ಲಿ, ಐಎಎಸ್ ಅಧಿಕಾರಿ ವಿಜಯಮಹಾಂತೇಶ್ ದಾನಮ್ಮನವರ ಕುಟುಂಬದ ಕಾರು ಪಲ್ಟಿಯಾಗಿದೆ.
ಕಾರಿನಲ್ಲಿ ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವೀಣಕುಮಾರ್ ಇದ್ದರು. ನಿನ್ನೆಯಷ್ಟೇ ವಿಜಯಪುರ ಜಿಲ್ಲಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದಾರೆ. ಹೀಗಾಗಿ ಅಧಿಕಾರವಹಿಸಿಕೊಳ್ಳಲು ಹೊರಟಿದ್ದ ಸಂದರ್ಭದಲ್ಲಿ ತಾಲೂಕಿನ ಯರಿಕೊಪ್ಪದ ಬಳಿ ಕಾರು ಪಲ್ಟಿಯಾಗಿದೆ.
ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಎಸ್ ಡಿಎಂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.