ಪ್ರಜಾಸ್ತ್ರ ಸುದ್ದಿ
ವಿಜಯಪುರ: ಜಿಲ್ಲಾ ಪಂಚಾಯ್ತಿಯ ಅಧ್ಯಕ್ಷ ಗಾದಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗಿದೆ. ಈ ಮೂಲಕ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸುಜಾತಾ ಕಳ್ಳಿಮನಿ ಆಯ್ಕೆಯಾಗಿದ್ದಾರೆ.
ಪ್ರತಿಸ್ಪರ್ಧಿ ಬಿಜೆಪಿಯ ಭೀಮಾಶಂಕರ ಬಿರಾದಾರ ವಿರುದ್ದ ಸುಜಾತ ಕಳ್ಳಿಮನಿ ಗೆಲುವು ಸಾಧಿಸಿದ್ದಾರೆ. 42 ಸದಸ್ಯ ಬಲದ ಜಿಲ್ಲಾ ಪಂಚಾಯ್ತಿಯಲ್ಲಿ, ಕೈ ಎತ್ತುವ ಮೂಲಕ ನಡೆದ ಮತದಾನ ಪ್ರಕ್ರಿಯೆಯಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಸುಜಾತಾ ಪರ 22 ಮತಗಳು ಚಲಾವಣೆಯಾಗಿವೆ. ಬಿಜೆಪಿಯ ಭೀಮಾಶಂಕರ ಬಿರಾದಾರ ಪರ 20 ಮತಗಳ ಚಲಾವಣೆಯಾಗಿವೆ.
20 ಸದಸ್ಯ ಬಲವಿದ್ದರೂ ಅಧ್ಯಕ್ಷ ಗಾದಿ ಹಿಡಿಯಲು ಬಿಜೆಪಿ ವಿಫಲವಾಗಿದೆ. ಈ ಮೂಲಕ ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ಸೋಲು ಅನುಭವಿಸಿದೆ. ಕಾಂಗ್ರೆಸ್ ಕಾರ್ಯಕರ್ತರ ಸಂಭ್ರಮ ಮುಗಿಲು ಮುಟ್ಟಿದೆ. ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಸೇರಿದಂತೆ ಅಧಿಕಾರಿಗಳು ಶುಭ ಕೋರಿದ್ರು.