ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ವಿನೋದ ಸವದಿ ಬಲಿಯಾಗಿದ್ದಾರೆ. ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರ ಸಹೋದರ ಪರಪ್ಪ ಸವದಿ ಪುತ್ರ ವಿನೋದ ಬುಧವಾರ ಬೆಳಗ್ಗೆ ನಿಧನರಾಗಿದ್ದಾರೆ.
ಜಿಲ್ಲೆಯಲ್ಲಿ ಸಾಕಷ್ಟು ಗುರುತಿಸಿಕೊಂಡಿದ್ದ 36 ವರ್ಷದ ವಿನೋದ ಸವದಿ ಕರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರ ತಂದೆ ಪರಪ್ಪ ಸವದಿ ಕೃಷ್ಣ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾಗಿದ್ದಾರೆ.