ವಿನಯ ಕುಲಕರ್ಣಿ ಜಾಮೀನು ಅರ್ಜಿ ವಜಾ

285

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯ್ತಿ ಸದಸ್ಯರಾಗಿದ್ದ ಯೋಗೇಶಗೌಡ ಹತ್ಯೆ ಪ್ರಕರಣ ಸಂಬಂಧ, ಸಿಬಿಐ ಬಂಧನಕ್ಕೆ ಒಳಗಾಗಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಜಾಮೀನು ಅರ್ಜಿಯನ್ನ ಹೈಕೋರ್ಟ್ ವಜಾಗೊಳಿಸಿದೆ.

ಈ ಪ್ರಕರಣ ಸಂಬಂಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಸಿದೆ. ಇದನ್ನ ಪರಿಗಣಿಸಿರುವ ಹೈಕೋರ್ಟ್, ಆರೋಪಿ ಪ್ರಭಾವಿ ವ್ಯಕ್ತಿಯಾಗಿದ್ದಾನೆ. ಜಾಮೀನು ನೀಡಿದ್ರೆ ಸಾಕ್ಷ್ಯನಾಶ ಮಾಡುವ ಸಾಧ್ಯತೆಯಿದೆ ಎಂದು ಹೇಳಿ ಜಾಮೀನು ಅರ್ಜಿ ವಜಾಗೊಳಿಸಿದೆ.

ಯೋಗೇಶಗೌಡ ಹತ್ಯೆ ಪ್ರಕರಣ ಸಂಬಂಧ 2020 ನವೆಂಬರ್ ತಿಂಗಳಲ್ಲಿ ಮಾಜಿ ಸಚಿವ ವಿನಯ ಕುಲಕರ್ಣಿ ಅವರನ್ನ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!