ಕುಂದಾನಗರಿಯಲ್ಲಿ ಮಣಿಪುರ ಮಾದರಿ ಕೃತ್ಯ

175

ಪ್ರಜಾಸ್ತ್ರ ಸುದ್ದಿ

ಬೆಳಗಾವಿ: ಕುಂದಾನಗರಿಯಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ ಎನ್ನುವುದಕ್ಕೆ ಮೇಲಿಂದ ಮೇಲೆ ನಡೆಯುತ್ತಿರುವ ಅಪರಾಧಿ ಕೃತ್ಯಗಳೇ ಸಾಕ್ಷಿಯಾಗಿವೆ. ಮಗ ಮಾಡಿದ ತಪ್ಪಿಗೆ ತಾಯಿಯನ್ನು ಬೆತ್ತಲು ಮಾಡಿ ಮೆರವಣಿಗೆ ಮಾಡಿ ಥಳಿಸಿರುವ ಘಟನೆ ಬೆಳಕಿಗೆ ಬಂದಿದೆ.

ದೌರ್ಜನ್ಯಕ್ಕೆ ಒಳಗಾದ ಮಹಿಳೆ ಮಗ ಹಾಗೂ ಯುವತಿಯೊಬ್ಬಳು ಪ್ರೀತಿಸುತ್ತಿದ್ದರು. ಇದಕ್ಕೆ ಕುಟುಂಬಸ್ಥರು ಒಪ್ಪಿರಲಿಲ್ಲ. ಇಂದು ಯುವತಿಯ ನಿಶ್ಚಿತಾರ್ಥವಿತ್ತು. ಆದರೆ, ನಿನ್ನೆ ರಾತ್ರಿ ಪ್ರೇಮಿಗಳು ಓಡಿ ಹೋಗಿದ್ದಾರೆ. ಇದರಿಂದ ಆಕ್ರೋಶಗೊಂಡ ಯುವತಿ ಕುಟುಂಬಸ್ಥರು ಯುವಕನ ಮೇಲೆ ಮೇಲೆ ದಾಳಿ ಮಾಡಿ ಇಂತಹ ನೀಚ ಕೃತ್ಯವೆಸಗಿದ್ದಾರೆ.

ಯುವಕನ ತಾಯಿಯನ್ನು ಬೆತ್ತಲೆಗೊಳಿಸಿ ಮೆರವಣಿಗೆ ಮಾಡಿ, ಕಂಬಕ್ಕೆ ಕಟ್ಟಿ ಹಾಕಿ ಥಳಿಸಿದ್ದಾರೆ. ಈ ಮೂಲಕ ಕರ್ನಾಟಕದಲ್ಲಿಯೂ ಮಣಿಪುರ ಮಾದರಿಯ ಕೃತ್ಯ ನಡೆಯುವ ಮೂಲಕ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ನಗರ ಪೊಲೀಸ್ ಆಯುಕ್ತ ಎಸ್.ಎನ್ ಸಿದ್ದರಾಮಪ್ಪ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಈ ಸಂಬಂಧ 7 ಜನರ ಬಂಧನವಾಗಿದೆ. ಮಕ್ಕಳು ಮಾಡುವ ತಪ್ಪುಗಳಿಗೆ ಹೆತ್ತವರು ಬಲಿಯಾಗುತ್ತಿರುವುದು ನಿಜಕ್ಕೂ ನೋವಿನ ಸಂಗತಿ.




Leave a Reply

Your email address will not be published. Required fields are marked *

error: Content is protected !!