ಪ್ರಜಾಸ್ತ್ರ ಸುದ್ದಿ
ಧಾರವಾಡ: ಸ್ವಾತಂತ್ರೊತ್ಸವದ ಅಮೃತ ಮಹೋತ್ಸವ ಅಂಗವಾಗಿ ವಿಶ್ವ ಪರಂಪರೆಯ ಸಪ್ತಾಹದ ಕಾರ್ಯಕ್ರಮವನ್ನು ನವೆಂಬರ್ 19ರಂದು ಆಯೋಜಿಸಲಾಗಿದೆ. ಕರ್ನಾಟಕ ಕಲಾ ಕಾಲೇಜಿನ ಸ್ನಾತಕ ಮತ್ತು ಸ್ನಾತಕೋತ್ತರ ಪ್ರವಾಸೋದ್ಯಮ ಅಧ್ಯಯನ ವಿಭಾಗ, ಭಾರತ ಸರ್ಕಾರದ ಪ್ರವಾಸೋದ್ಯಮ ಇಲಾಖೆ ಮತ್ತು ಧಾರವಾಡ ವಲಯದ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಲಿದೆ.
ಪ್ರವಾಸೋದ್ಯಮ ಅಧ್ಯಯನ ವಿಭಾಗದ ಭುವನ ವಿಜಯ ಸಭಾಂಗಣದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ನವೆಂಬರ್ 19ರಿಂದ 25ರ ತನಕ ಉತ್ತರ ಕರ್ನಾಟಕದ ಪುರಾತತ್ವ ಪರಂಪರೆಯ ಕುರಿತು ಛಾಯಾಚಿತ್ರ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಕೆ.ಬಿ.ಗುಡಸಿ ಸೇರಿ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.