ಪ್ರಜಾಸ್ತ್ರ ಸುದ್ದಿ
ಮೈಸೂರು: ಪ್ರಜಾಧ್ವನಿ ಸಮಾವೇಶದ ಹಿನ್ನೆಲೆಯಲ್ಲಿ ನಗರದಲ್ಲಿ ವಾಸ್ತವ್ಯ ಹೂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೇವಾಲ್ ಜೊತೆಗೆ ಎಂಎಲ್ಸಿ ಎಚ್.ವಿಶ್ವನಾಥ್ ಶುಕ್ರವಾರ ಚರ್ಚೆ ನಡೆಸಿದರು.
ಈಗಾಗ್ಲೇ ವಾಪಸ್ ಕಾಂಗ್ರೆಸ್ ಸೇರುವ ಬಗ್ಗೆ ವಿಶ್ವನಾಥ್ ಹೇಳಿದ್ದಾರೆ. ಹೀಗಾಗಿ ಎಐಸಿಸಿ ಮಟ್ಟದ ಪದಾಧಿಕಾರಿಗಳನ್ನು ರಾಜ್ಯ ನಾಯಕರೊಂದಿಗೆ ಭೇಟಿಯಾಗಿ ಮಾತುಕತೆ ನಡೆಸುತ್ತಿದ್ದಾರೆ. ಇಂದು ಮೈಸೂರಿನ ಹೋಟೆಲ್ ವೊಂದರಲ್ಲಿ ತಂಗಿರುವ ಸುರ್ಜೇವಾಲ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು.