ರಾಮ ಮಂದಿರ ಹೇಗೆ ಕಟ್ಟಿದ್ದಾರೆ ನೋಡುತ್ತೇನೆ: ಸಿಎಂ ಸಿದ್ದರಾಮಯ್ಯ

176

ಪ್ರಜಾಸ್ತ್ರ ಸುದ್ದಿ

ಶಿವಮೊಗ್ಗ: ಯುವನಿಧಿ ಯೋಜನೆಗೆ ಚಾಲನೆ ನೀಡುವ ಸಂಬಂಧ ಶಿವಮೊಗ್ಗಕ್ಕೆ ಬಂದ ವೇಳೆ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ನಾನು ರಾಮ ಭಕ್ತ. ಆದರೆ, ನಾವು ಧಾರ್ಮಿಕ ವಿಷಯಗಳಲ್ಲಿ ರಾಜಕೀಯ ವಿರೋಧಿಸುತ್ತೇವೆ. ರಾಮ ಮಂದಿರ ಉದ್ಘಾಟನೆ ಬಳಿಕ ಅಯೋಧ್ಯೆಗೆ ಭೇಟಿ ನೀಡುತ್ತೇನೆ ಎಂದಿದ್ದಾರೆ.

ನಾವು ಶ್ರೀರಾಮನನ್ನು ವಿರೋಧಿಸಿಲ್ಲ. ಆದರೆ, ಬಿಜೆಪಿಯವರು ರಾಜಕೀಯ ಮಾಡಲು ಹೊರಟಿದ್ದಾರೆ. ನಾನು ರಾಮ ಮಂದಿರಕ್ಕೆ ಭೇಟಿ ಕೊಡುತ್ತೇನೆ. ಮಂದಿರ ಹೇಗೆ ಕಟ್ಟಿದ್ದಾರೆ ಎನ್ನುವುದನ್ನು ನೋಡಿಕೊಂಡು ಬರುತ್ತೇನೆ ಅಂತಾ ಹೇಳಿದರು.




Leave a Reply

Your email address will not be published. Required fields are marked *

error: Content is protected !!