ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ಸೋಂಕು ನಿಯಂತ್ರಣಕ್ಕೆ ಎಲ್ಲ ಕ್ರಮಗಳನ್ನ ತೆಗೆದುಕೊಳ್ಳಲಾಗ್ತಿದೆ. ಸೋಂಕು ಹೆಚ್ಚಾಗುತ್ತಿರುವ ಗಡಿ ಜಿಲ್ಲೆಗಳಿಗೆಲ್ಲ ಭೇಟಿ ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮೈಸೂರಿಗೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತ್ನಾಡಿದ ಅವರು, ಮೈಸೂರಿನಲ್ಲಿ ಕೋವಿಡ್ ಸೋಂಕಿನ ಬಗ್ಗೆ ಅಧಿಕಾರಿಗಳ ಜೊತೆ ಸಭೆ ನಡೆಸುತ್ತೇನೆ. ಸೋಂಕು ನಿಯಂತ್ರಣದ ಬಗ್ಗೆ ಪರಿಶೀಲನೆ ನಡೆಸುತ್ತೇನೆ ಎಂದರು. ಇದಾದ್ಮೇಲೆ ಚಾಮುಂಡಿ ಬೆಟ್ಟಕ್ಕೆ ತೆರಳಿ ಚಾಮುಂಡೇಶ್ವರಿ ದರ್ಶನ ಪಡೆಯುತ್ತೇನೆ ಅಂತಾ ತಿಳಿಸಿದರು.
ಮುಖ್ಯಮಂತ್ರಿ ಜೊತೆ ಸಚಿವರಾದ ಮುರುಗೇಶ ನಿರಾಣಿ, ಡಾ.ಕೆ ಸುಧಾಕರ, ಭೈರತಿ ಬಸವರಾಜ, ಎಸ್.ಟಿ ಸೋಮಶೇಖರ ಹಾಗೂ ಡಾ.ನಾರಾಯಣಗೌಡ ಉಪಸ್ಥಿತರಿದ್ದರು.