ಪ್ರಜಾಸ್ತ್ರ ಸುದ್ದಿ
ಸಿಂದಗಿ: ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಕೋವಿಡ್ ಕೇಂದ್ರಕ್ಕೆ, ನಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಅಶೋಕ ಅಲ್ಲಾಪೂರ ಅವರು ಇತ್ತೀಚೆಗೆ ಭೇಟಿ ನೀಡಿ, ಅಲ್ಲಿನ ವ್ಯವಸ್ಥೆ ಕುರಿತು ಸಿಬ್ಬಂದಿಯ ಜೊತೆಗೆ ಚರ್ಚಿಸಿದ್ರು.
ಇಂಡಿ ಎಸಿ ಸಿಂಧೆ, ತಹಶೀಲ್ದಾರ್ ಸಂಜೀವಕುಮಾರ ದಾಸರ, ಟಿಹೆಚ್ಓ ಡಾ.ಇಂಗಳೆ ಹಾಗೂ ಆಸ್ಪತ್ರೆಯ ಸಿಬ್ಬಂದಿ ಜೊತೆಗೆ ಕೋವಿಡ್ ಚಿಕಿತ್ಸೆ ಕುರಿತು ಚರ್ಚಿಸಲಾಯ್ತು. 30 ಆಕ್ಸಿಜನ್ ಬೆಡ್ ಗಳನ್ನ ಹೊರತುಪಡಿಸಿ ಇನ್ನೂ 10 ಆಕ್ಸಿಜನ್ ಬೆಡ್ ಗಳನ್ನ ಹೆಚ್ಚಿಸಲು ಸೂಚಿಸಲಾಯ್ತು.
ಇನ್ನು ರೋಗಿಗಳಿಗೆ ಪೌಷ್ಟಿಕ ಆಹಾರ, ಆಸ್ಪತ್ರೆಯಲ್ಲಿ ಸ್ವಚ್ಛತೆ, ಆಂಬ್ಯುಲೆನ್ಸ್ ಸೌಲಭ್ಯ, ಆಕ್ಸಿಜನ್ ಸಿಲಿಂಡರ್ ಕೊರತೆ ಆಗದಂತೆ ನೋಡಿಕೊಳ್ಳುವುದು ಸೇರಿದಂತೆ ಮುನ್ನೆಚ್ಚರಿಕೆ ಕ್ರಮಗಳ ಕುರಿತು ತಿಳಿಸಲಾಯ್ತು. ಆಸ್ಪತ್ರೆಯ ಸಿಬ್ಬಂದಿಯ ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ಮನವಿ ಮಾಡಲಾಯ್ತು.