ಬೆಂಗಳೂರು: ಡಿ.ಕೆ ಶಿವಕುಮಾರ ಬಂಧನ ಖಂಡಿಸಿ ಒಕ್ಕಲಿಗರ ಸಂಘದಿಂದ 10.30ಕ್ಕೆ ಪ್ರತಿಭಟನೆ ನಡೆಸಲು ಪ್ಲಾನ್ ಮಾಡಲಾಗಿದೆ. ಹೀಗಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಸಾವಿರಾರು ಜನ ಬೆಂಬಲಿಗರು, ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಸೇರಿಕೊಂಡಿದ್ದಾರೆ.
ಇಂದು ಬೆಳಗ್ಗೆ 10.30ರಿಂದ ಬೃಹತ್ ಪ್ರತಿಭಟನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನ್ಯಾಷನಲ್ ಕಾಲೇಜು ಮೈದಾನದಿಂದ ಫ್ರೀಡಂ ಪಾರ್ಕ್ ವರೆಗೂ ಮೆರವಣಿಗೆ ನಡೆಯಲಿದೆ. ಹೀಗಾಗಿ ಬೆಂಗಳೂರು ಪೊಲೀಸ್ರು ಸಕಲ ರೀತಿಯಿಂದ ಮುನ್ನಾಚರಿಕೆ ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. 5 ಸಾವಿರಕ್ಕೂ ಹೆಚ್ಚು ಪೊಲೀರನ್ನ ಭದ್ರತೆಗಾಗಿ ನಿಯೋಜನೆ ಮಾಡಲಾಗಿದೆ.
ಪ್ಯಾಲೇಸ್ ರೋಡ್ ಜಂಕ್ಷನ್, ಕಾಳಿದಾಸ ರಸ್ತೆ, ಜೆ.ಸಿ ರೋಡ್, ಸಜ್ಜನರಾವ ಸರ್ಕಲ್, ಟೌನ್ ಹಾಲ್, ಮೈಸೂರು ಬ್ಯಾಂಕ್ ಸರ್ಕಲ್, ಕಾರ್ಪೂರೇಷನ್ ರಸ್ತೆ, ವಿಧಾನಸೌಧ, ಕೆ.ಆರ್ ಮಾರುಕಟ್ಟೆ ರಸ್ತೆ, ರೇಸ್ ಕೋರ್ಟ್ ರೋಡ್, ಶಿವಾನಂದ ಸರ್ಕಲ್, ಆನಂದರಾವ ಸರ್ಕಲ್ ಸೇರಿದಂತೆ ಅನೇಕ ಕಡೆ ಬಹುದೊಡ್ಡ ಜಾಮ್ ಆಗುವ ಸಾಧ್ಯತೆಯಿದೆ.