ಪ್ರಜಾಸ್ತ್ರ ಸುದ್ದಿ
ಸಿಂದಗಿ: ಪದ್ಮರಾಜ ಮಹಿಳಾ ಪದವಿ ಮಹಾವಿದ್ಯಾಲಯ ಹಾಗೂ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ, ವಿಜಯಪುರ ಇವರ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 15ರಂದು ವಾಲಿಬಾಲ್ ಪಂದ್ಯಾವಳಿ ನಡೆಯಲಿದೆ ಎಂದು ಕಾಲೇಜಿನ ಪ್ರಾಚಾರ್ಯರಾದ ಎಸ್.ಎಂ ಪೂಜಾರಿ ತಿಳಿಸಿದರು.
ಈ ಕುರಿತು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಕಾಲೇಜಿನಲ್ಲಿ ಒಂದೂವರೆ ಲಕ್ಷ ರೂಪಾಯಿ ಖರ್ಚು ಮಾಡಿ ಸುಸಜ್ಜಿತವಾದ ವಾಲಿಬಾಲ್ ಮೈದಾನ ನಿರ್ಮಿಸಲಾಗಿದೆ. ವಿವಿಧ ಜಿಲ್ಲೆಯ ಸುಮಾರು 15 ತಂಡಗಳು ಇಲ್ಲಿಯೇ ಆಡಲಿವೆ. ಮರುದಿನ ವಿಶ್ವವಿದ್ಯಾಲಯ ಮಟ್ಟಕ್ಕೆ ಆಯ್ಕೆ ನಡೆಯಲಿದೆ. ಇದಕ್ಕಾಗಿ ಆಯ್ಕೆ ಸಮಿತಿ ಬರಲಿದೆ. ಆಟಗಾರರು, ಅವರೊಂದಿಗೆ ಬರುವ ಸಿಬ್ಬಂದಿಗೆ ಊಟ, ವಸತಿಯ ವ್ಯವಸ್ಥೆ ಮಾಡಲಾಗಿದೆ ಎಂದರು.
ಬೆಳಗ್ಗೆ 9 ಗಂಟೆಗೆ ಕಾರ್ಯಕ್ರಮ ನಡೆಯಲಿದೆ. ಕೊನ್ನೂರುಮಠದ ವಿಶ್ವಪ್ರಭು ಶಿವಾಚಾರ್ಯರು ಮೈದಾನ ಉದ್ಘಾಟಿಸಲಿದ್ದಾರೆ. ಟೂರ್ನಿಯನ್ನು ಶಾಸಕ ರಮೇಶ ಭೂಸನೂರ ಉದ್ಘಾಟಿಸಲಿದ್ದಾರೆ. ಸಾರಂಗಮಠದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು ಸಾನಿಧ್ಯ ವಹಿಸಿಕೊಳ್ಳಲಿದ್ದಾರೆ. ನೆಹರು ಪೋರವಾಲ, ವಿವೇಕಾನಂದ ಸಾಲಿಮಠ, ಬಿ.ಜಿ ಮಠ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಸಜೆ 5ಗಂಟೆಗೆ ಬಹುಮಾನ ವಿತರಣೆ ನಡೆಯಲಿದೆ. ಕಾಂಗ್ರೆಸ್ ಮುಖಂಡ ಅಶೋಕ ಮನಗೂಳಿ ಬಹುಮಾನ ವಿತರಿಸಲಿದ್ದಾರೆ. ಅಶೋಕ ವಾರದ, ಅಶೋಕ ಮಸಳಿ, ಗಂಗಾಧರ ಜೋಗುರ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಈ ವೇಳೆ ಪದವಿ ಪೂರ್ವ ಕಾಲೇಜು ಪ್ರಾಚಾರ್ಯರಾದ ಎಂ.ಎಸ್ ಹೈಯಾಳ್ಕರ, ಪ್ರೊ.ರವಿ ಗೋಲಾ, ಸಂಘಟನಾ ಕಾರ್ಯದರ್ಶಿ ಬಿ.ಜಿ ಅವಟಿ ಸೇರಿ ಇತರರು ಉಪಸ್ಥಿತರಿದ್ದರು.