ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಅಕ್ರಮ ಮತದಾರರ ಮಾಹಿತಿ ಸಂಗ್ರಹವಾಗಿದೆ ಅನ್ನೋ ಕಾಂಗ್ರೆಸ್ ನವರ ಆರೋಪಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಅವರು ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನವರು ಅವರ ವಿಚಾರದಲ್ಲಿ ದಿವಾಳಿಯಾಗಿದ್ದಾರೆ ಎನಿಸುತ್ತದೆ ಎಂದಿದ್ದಾರೆ.
ಚುನಾವಣೆ ಆಯೋಗ ರದ್ದು ಮಾಡಿದ್ದಕ್ಕೆ ಬಿಬಿಎಂಪಿ, ಸ್ಥಳೀಯ ಸಂಸ್ಥೆಗಳಿಗೆ ಕೊಟ್ಟಿರುತ್ತಾರೆ. ಅವರು ಎನ್ ಜಿಒಗಳಿಗೆ ಕೊಡುತ್ತಾರೆ. 2018ರಲ್ಲಿ ಇವರ ಸರ್ಕಾರ ಇದ್ದಾಗಲೂ ಕೊಟ್ಟಿದ್ದಾರೆ. ಹಂಚಿಕೆಯಾದ ಮಾಹಿತಿಯನ್ನು ಎನ್ ಜಿಒಗಳು ದುರ್ಬಳಕೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಎಲ್ಲದರ ಕುರಿತು ಸಮಗ್ರವಾಗಿ ತನಿಖೆ ಮಾಡುವಂತೆ ನಾನು ಸೂಚನೆಯನ್ನು ಕೊಡುತ್ತೇನೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಹೇಳಿದ್ದಾರೆ.