ಪ್ರಜಾಸ್ತ್ರ ಸುದ್ದಿ
ಚಿಕ್ಕಮಗಳೂರು: ಸಾಕಷ್ಟು ಕ್ರೇಜ್ ಹುಟ್ಟು ಹಾಕಿದ್ದ ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಇಂದು ರಿಲೀಸ್ ಆಗಿದೆ. ಹೀಗಿರಬೇಕಾದರೆ ನಗರದ ಮಿಲನ ಥಿಯೇಟರ್ ಬಳಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದೆ.
ಭರತ್ ಎಂಬಾತನನ್ನು ಇನ್ನೊಂದು ಯುವಕರ ಗುಂಪು ಕ್ಷುಲ್ಲಕ ಕಾರಣಕ್ಕೆ ಮನಬಂದಂತೆ ಥಳಿಸಿದೆಯಂತೆ. ಗಂಭೀರವಾಗಿ ಗಾಯಗೊಂಡಿರುವ ಭರತನನ್ನು ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿದೆ.