ಪ್ರಜಾಸ್ತ್ರ ಸುದ್ದಿ
ಮುಂಬೈ: ಮಹಾರಾಷ್ಟ್ರದಲ್ಲಿ ಭರ್ಜರಿ ಮಳೆಯಾಗ್ತಿದೆ. ಇದ್ರಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ಥವಾಗಿದೆ. ಇದರ ನಡುವೆ 4 ಮನೆಗಳು ಕುಸಿದು 11 ಮಂದಿ ಮೃತಪಟ್ಟ ದುರಂತ ಸಂಭವಿಸಿದೆ.
ಚೆಂಬೂರು ಹಾಗೂ ವಿಕ್ರೋಲಿಯಲ್ಲಿ ಈ ದುರಂತ ನಡೆದಿದೆ. ಮಕ್ಕಳು, ಮಹಿಳೆಯರು ಸೇರಿದಂತೆ 11 ಮಂದಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಅವಶೇಷಗಳಡಿಯಲ್ಲಿ ಇನ್ನು ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಎನ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದ್ದು 13 ಜನರನ್ನ ರಕ್ಷಿಸಲಾಗಿದೆ.