ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ನಗರದ ಮಹಾಲಕ್ಷ್ಮೀ ಲೇಔಟ್ ನಲ್ಲಿ ಗೋಡೆ ಸಮೇತ ಶೆಡ್ ಕುಸಿದ ಪರಿಣಾಮ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಬಿಹಾರ ಮೂಲಕ 19 ಪೂರನ್ ವರ್ಷದ ಮೃತ ದುರ್ದೈವಿ ಎಂದು ತಿಳಿದು ಬಂದಿದೆ.
ಸಿಕಾನ್ ಕಂಪನಿಯ ವತಿಯಿಂದ ಕಟ್ಟಡ ಕೆಲಸ ನಡೆಯುತ್ತಿದ್ದು, ಇಲ್ಲಿ ಕೆಲಸಕ್ಕೆ ಬಂದವರಿಗೆ ತಾತ್ಕಾಲಿಕ ಶೆಡ್ ನಿರ್ಮಿಸಿ ಕೊಡಲಾಗಿತ್ತು. ಶೆಡ್ ಪಕದಲ್ಲಿ ಬೃಹತ್ ಗೋಡೆ ಇತ್ತು. ಈ ಗೋಡೆ ಕುಸಿದ ಪರಿಣಾಮ ಕಾರ್ಮಿಕ ಸಾವನ್ನಪ್ಪಿದ್ದಾನೆ.
ಇನ್ನು ಈ ಘಟನೆಯಲ್ಲಿ 21 ವರ್ಷದ ಭವಾನಿ ಸಿಂಗ್ ಹಾಗೂ 22 ವರ್ಷದ ಮಿಥುನ ಅನ್ನೋ ಇಬ್ಬರಿಗೆ ಗಾಯಗಳಾಗಿದ್ದು, ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿದೆ.