ರಾಂಪುರ: ಚುನಾವಣೆ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಸಂಬಂಧಿಸಿದಂತೆ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಉತ್ತರ ಪ್ರದೇಶ ಕೋರ್ಟ್ ಇಂದು ವಾರೆಂಟ್ ಜಾರಿ ಮಾಡಿದೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ರಾಂಪುರದಿಂದ ಸ್ಪರ್ಧಿಸಿದ್ರು. ಈ ವೇಳೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ದೂರು ಸಲ್ಲಿಸಲಾಗಿತ್ತು. ಇದೀಗ ವಾರೆಂಟ್ ನೀಡಲಾಗಿದ್ದು, ಏಪ್ರಿಲ್ 20ಕ್ಕೆ ವಿಚಾರಣೆ ನಡೆಯಲಿದೆ. ಈ ಎಲೆಕ್ಷನ್ ನಲ್ಲಿ ಸಮಾಜವಾದಿ ಪಕ್ಷದ ಅಭ್ಯರ್ಥಿ ಅಜಂ ಖಾನ್ ವಿರುದ್ಧ ಸೋತಿದ್ದಾರೆ.