ಐವರು ಯೋಧರು ಹುತಾತ್ಮ

338

ಶ್ರೀನಗರ: ಕಣಿವೆ ನಾಡಿನ ಹಂದ್ವಾರದಲ್ಲಿ ಉಗ್ರರ ವಿರುದ್ಧ ನಡೆದ ಕಾಳಗದಲ್ಲಿ ಇಬ್ಬರು ಸೇನಾಧಿಕಾರಿಗಳು ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ. ಇನ್ನು ಇಬ್ಬರು ಭಯೋತ್ಪಾದಕರನ್ನ ಭಾರತೀಯ ಸೇನಾ ಪಡೆ ಹೊಡೆದುರುಳಿಸಿದೆ.

ಹಂದ್ವಾರದ ಛಾಂಜ್ಮುಲ್ಲಾ ಪ್ರದೇಶದಲ್ಲಿ ಉಗ್ರರು ಸ್ಥಳೀಯರನ್ನ ಒತ್ತೆಯಾಳುಗಳನ್ನಾಗಿರಿಸಿಕೊಂಡಿರುವುದು ತಿಳಿದು ಬಂದಿದೆ. ಆಗ ಸೇನಾಪಡೆ ಕಾರ್ಯಾಚರಣೆಗೆ ಮುಂದಾಗಿದೆ. ಈ ವೇಳೆ ಏಕಾಏಕಿ ಗುಂಡಿನ ದಾಳಿಯನ್ನ ಶುರು ಮಾಡಿದ್ದಾರೆ. ಇದ್ರಿಂದಾಗಿ ಇಬ್ಬರು ಸೇನಾಧಿಕಾರಿಗಳು ಸೇರಿ ಐವರು ಯೋಧರು ಹುತಾತ್ಮರಾಗಿದ್ದಾರೆ.

ಈ ಗುಂಡಿನ ಚಕಮಕಿಯಲ್ಲಿ ಇಬ್ಬರ ಉಗ್ರರನ್ನ ಹತ್ಯೆ ಮಾಡಲಾಗಿದೆ. ಒತ್ತೆಯಾಳುಗಳಾಗಿದ್ದ ನಾಗರೀಕರನ್ನ ಸುರಕ್ಷಿತವಾಗಿ ರಕ್ಷಿಸಲಾಗಿದೆ ಎಂದು ತಿಳಿದು ಬಂದಿದೆ.




Leave a Reply

Your email address will not be published. Required fields are marked *

error: Content is protected !!