ಕಿತ್ತೂರು: ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ವೀರಾಪುರ ಗ್ರಾಮದಲ್ಲಿ ಕುಡಿಯುವ ನೀರಿಗೆ ಅಭಾವ ಉಂಟಾಗಿದೆ. ತಾಲೂಕಿನ ದಾಸ್ತಿಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ವೀರಾಪುರದಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ.
ಪ್ರವಾಹಕ್ಕೆ ಸಿಲುಕಿ ಹೈರಾಣಾಗಿ ಹೋಗಿರುವ ಬೆಳಗಾವಿ ಜಿಲ್ಲೆಯ ಹಳ್ಳಿಯೊಂದರ ಕಥೆಯಿದು. ಕಳೆದ 10 ದಿನಗಳಿಂದ ಕುಡಿಯುವುದಕ್ಕೆ ಹಾಗೂ ದಿನ ಬಳಕೆಗೆ ನೀರಿಲ್ಲದೆ ಸಾಕಷ್ಟು ತೊಂದರೆಯಾಗಿದೆ. ಬಗ್ಗೆ ಇಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ, ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ರೂ, ಸಮಸ್ಯೆ ಬಗೆಹರಿಸುವುದಕ್ಕೆ ಅವರ ಕೈಯಲ್ಲಿ ಆಗ್ತಿಲ್ಲ.
ಮೇಲಾಧಿಕಾರಿಗಳಾದ ಸಹಾಯಕ ನಿರ್ದೇಶಕರು, ಬೈಲಹೊಂಗಲ ತಾಲೂಕು ಪಂಚಾಯಿತಿಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಹಾಗೂ ಬೆಳಗಾವಿ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕೆಂದು ವೀರಾಪುರ ಗ್ರಾಮಸ್ಥರು ಕೇಳಿಕೊಂಡಿದ್ದಾರೆ.