ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿದ್ದರಾಮಯ್ಯನವರು 2ನೇ ಬಾರಿಗೆ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಡಿ.ಕೆ ಶಿವಕುಮಾರ್ ಅವರು ಡಿಸಿಎಂ ಆಗಿ ಹಾಗೂ 8 ಶಾಸಕರು ಸಂಪುಟ ದರ್ಜೆ ಸಚಿವರಾಗಿ ಅಧಿಕಾರ ವಹಿಸಿಕೊಂಡರು. ಇದಾದ ಮೇಲೆ ಕಾಂಗ್ರೆಸ್ ನಾಯಕರು ಮಾತನಾಡಿದರು.
ರಾಜ್ಯದ ಜನತೆಗೆ ಕಾಂಗ್ರೆಸ್ ಪಕ್ಷದ ವತಿಯಿಂದ, ನನ್ನ ಕಡೆಯಿಂದ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ನೀವು ಕಾಂಗ್ರೆಸ್ ಗೆ ಬಹುಮತ ಕೊಟ್ಟಿದ್ದೀರಿ. ನಾವು ಭ್ರಷ್ಟಾಚಾರ ಮುಕ್ತ ಸರ್ಕಾರ ನೀಡುತ್ತೇವೆ. ಕೆಲವು ಗಂಟೆಗಳಲ್ಲೇ ನಾವು ಕೊಟ್ಟ 5 ಗ್ಯಾರೆಂಟಿಗಳನ್ನು ಜಾರಿಗೆ ತರುತ್ತೇವೆ ಅಂತಾ ಹೇಳಿದರು.
ಇದಾದ ಮೇಲೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾತನಾಡಿದರು. ಜನರಿಗೆ ಪಕ್ಷ ನೀಡಿದ ಭರವಸೆಗಳನ್ನು ಈಡೇರಿಸಲಿದೆ. ಜನಪರ ಪಕ್ಷ ಜನರ ಪರ ಕೆಲಸ ಮಾಡುತ್ತೆ ಎಂದರು.