ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೃಷಿ ಕಾಯ್ದೆ ವಿರೋಧಿಸಿ ಹೋರಾಟ ಮಾಡುತ್ತಿರುವ ರೈತರಿಗೆ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ಇದು ಕಾಂಗ್ರೆಸ್ ಪಕ್ಷದ ಹೋರಾಟವೂ ಅಲ್ಲ. ಕಾಂಗ್ರೆಸ್ ಪರ ಹೋರಾಟವೂ ಅಲ್ಲ. ರೈತ ವಿರೋಧಿ ಕಾನೂನು ಹಿಂದಕ್ಕೆ ಪಡೆದುಕೊಳ್ಳಿ ಎನ್ನುತ್ತಿದ್ದಾರೆ ಎಂದರು.
ನಮ್ಮದು ರೈತರ ಪರವಾಗಿರುವ ಪಕ್ಷ. ಹೀಗಾಗಿ ನಾವು ಅವರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದೇವೆ. ಕೇಂದ್ರ ಸರ್ಕಾರ ಮೂರು ಕೃಷಿ ಕಾಯ್ದೆಗಳನ್ನು ಹಿಂದಕ್ಕೆ ಪಡೆಯಬೇಕು ಎಂದರು.