‘5 ಗ್ಯಾರೆಂಟಿ ಯೋಜನೆ ಜಾರಿ ಮಾಡಿ ಕೊಟ್ಟು ಮಾತು ಉಳಿಸಿಕೊಳ್ಳುತ್ತೇವೆ’

118

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಜನರ ಆಶೀರ್ವಾದಿಂದ ನಾಳೆ ರಚನೆಯಾಗುತ್ತಿರುವ ಕಾಂಗ್ರೆಸ್ ಸರ್ಕಾರ ಜನರ ಧ್ವನಿಯಾಗಿ ಕೆಲಸ ಮಾಡಲಿದೆ. ಜನರಿಗೆ ನಾವು ಕೊಟ್ಟಂತಹ 5 ಗ್ಯಾರೆಂಟಿಗಳ ಭರವಸೆಯನ್ನು ಜಾರಿಗೆ ತಂದು ಮಾತು ಉಳಿಸಿಕೊಳ್ಳುತ್ತೇವೆ ಎಂದು ನಿಯೋಜಿತ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.

ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದ ಜನತೆಗೆ, ಪಕ್ಷದ ನಾಯಕರುಗಳಿಗೆ, ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುತ್ತೇನೆ. ಕಾರ್ಯಕ್ರಮಕ್ಕೆ ರಾಷ್ಟ್ರೀಯ ನಾಯಕರಿಗೆ ಆಹ್ವಾನ ನೀಡಲಾಗಿದೆ. ಕಾರ್ಯಕ್ರಮ ಪಕ್ಷಾತೀತವಾಗಿರಲಿದೆ. ಹೀಗಾಗಿ ಬಿಜೆಪಿ, ಜೆಡಿಎಸ್ ನಾಯಕರಿಗೂ ಆಹ್ವಾನ ನೀಡುತ್ತೇವೆ. ನೀವೂ ಸರ್ಕಾರದ ಭಾಗ. ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿಕೊಳ್ಳುತ್ತೇನೆ ಎಂದರು.




Leave a Reply

Your email address will not be published. Required fields are marked *

error: Content is protected !!