ಪ್ರಜಾಸ್ತ್ರ ಸುದ್ದಿ
ದಾವಣಗೆರೆ: ಶುಕ್ರವಾರ ಮದುವೆ ಊಟ ಮಾಡಿದ 500ಕ್ಕೂ ಹೆಚ್ಚು ಜನರಲ್ಲಿ 140 ಮಂದಿ ಅಸ್ವಸ್ಥರಾಗಿದ್ದಾರೆ. ಮಧ್ಯರಾತ್ರಿಯಿಂದ ಆರೋಗ್ಯ ಸಮಸ್ಯೆ ಕಾಣಿಸಿಕೊಂಡಿದ್ದು ಶನಿವಾರ ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಹಳೇದೇವರಹೊನ್ನಾಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಶನಿವಾರ ಮಧ್ಯರಾತ್ರಿಯಿಂದ ಆರೋಗ್ಯದಲ್ಲಿ ಏರುಪೇರು ಆಗಿದ್ದು, ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. 10 ಜನರಿಗೆ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ. ವಿಷಪೂರಿತ ಆಹಾರದಿಂದ ಹೀಗಾಗಿದೆ ಎನ್ನಲಾಗುತ್ತಿದೆ. ಯಾರಿಗೂ ಪ್ರಾಣಾಪಾಯವಿಲ್ಲವೆಂದು ಆಸ್ಪತ್ರೆ ವೈದ್ಯಾಧಿಕಾರಿ ಡಾ.ಚಂದ್ರಪ್ಪ ತಿಳಿಸಿದ್ದಾರೆ.