ಪ್ರಜಾಸ್ತ್ರ ಸುದ್ದಿ
ವಿಜಯಪುರ: ಕರೋನಾ ಸೋಂಕಿನ ಪ್ರಮಾಣ ಹೆಚ್ಚಾಗುತ್ತಿದೆ ಎಂದು ಸರ್ಕಾರ ಈ ಮತ್ತೆ ನೈಟ್ ಕರ್ಫ್ಯೂ ಜೊತೆಗೆ ಮಹಾರಾಷ್ಟ್ರ, ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ವಾರಂತ್ಯದ ಕರ್ಫ್ಯೂ ಸಹ ಜಾರಿ ಮಾಡಿದೆ. ಹೀಗೆ ಜನರ ಬದುಕಿನ ಪದೆಪದೆ ಬರೆ ಎಳೆಯುತ್ತಾ ಹೋದರೆ ಜೀವನ ಮಾಡೋದು ಹೇಗೆ ಅಂತಿದ್ದಾರೆ ಜನರು.
ಲಾಕ್ ಡೌನ್ ಸಡಿಲಿಕೆಯಿಂದ ಒಂದಿಷ್ಟು ವ್ಯಾಪಾರ ವಹಿವಾಟ ನಿಧಾನವಾಗಿ ಮರಳುತ್ತಿದೆ ಎನ್ನುವಷ್ಟರಲ್ಲಿ ಈಗ ಮತ್ತೆ ಈ ರೀತಿಯಾಗಿ ಎರಡು ದಿನಗಳ ಕಾಲ ಜಿಲ್ಲೆಗಳನ್ನ ಬಂದ್ ಮಾಡಿದರೆ ಹೇಗೆ ಅಂತಿದ್ದಾರೆ ವಿಜಯಪುರದ ಜನತೆ. ಕುಟುಂಬಸ್ಥರ ಜೀವದ ಜೊತೆಗೆ ಉದ್ಯೋಗ, ಆದಾಯ ಕಸಿದುಕೊಳ್ಳಲಾಗಿದೆ. ಇದರಿಂದ ಸುಧಾರಿಸಕೊಳ್ಳಲು ಕನಿಷ್ಠ ಒಂದೆರಡು ವರ್ಷ ಬೇಕು. ಈಗ ಮತ್ತೆ ವೀಕೆಂಡ್ ಕರ್ಫ್ಯೂ ಮಾಡಿದರೆ ಹೇಗೆ ಅನ್ನೋ ಪ್ರಶ್ನೆ ಎದುರಾಗಿದೆ.
ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೋವಿಡ್ ಸೋಂಕು ಹಚ್ಚುತ್ತಿರುವ ಹಿನ್ನೆಲೆಯಲ್ಲಿ ಈ ರಾಜ್ಯಗಳೊಂದಿಗೆ ಗಡಿ ಹಂಚಿಕೊಂಡಿರುವ ವಿಜಯಪುರ, ಬೆಳಗಾವಿ, ಬೀದರ, ಕಲಬುರಗಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಹೇರಲಾಗಿದೆ.