ಪೊಲೀಸರ ವಿರುದ್ಧ ವಿಜಯಪುರದಲ್ಲಿ ತರಕಾರಿ ಮಾರಾಟಗಾರರ ಆಕ್ರೋಶ

237

ಪ್ರಜಾಸ್ತ್ರ ಸುದ್ದಿ

ವಿಜಯಪುರ: ನಗರದಲ್ಲಿನ ತರಕಾರಿ ಮಾರುಕಟ್ಟೆ ಬಂದ್ ಮಾಡಿಸುತ್ತಿದ್ದಾರೆ ಎಂದು ಪೊಲೀಸರು ವಿರುದ್ಧ ರೈತರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ ರೊಚ್ಚಿಗೆದ್ದ ಕೆಲವು ರೈತರು ತರಕಾರಿಗಳನ್ನು ರಸ್ತೆಯ ಮೇಲೆ ಚೆಲ್ಲಿ ಪ್ರತಿಭಟನೆ ನಡೆಸಿದರು.

ವಿಜಯಪುರ ನಗರದ ಗೋದಾವರಿ ಹೋಟೆಲ್ ಮುಂಭಾಗದಲ್ಲಿ ಈ ಘಟನೆ ನಡೆದಿದೆ. ತರಕಾರಿ ಮಾರಾಟ ಮಾಡಲು ಪೊಲೀಸರು ಅವಕಾಶ ನೀಡುತ್ತಿಲ್ಲ ಎಂದು ನೂರಾರು ರೈತರು ಜಮಾವಣೆಗೊಂಡು ಪೊಲೀಸರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದು, ನಮಗೆ ತರಕಾರಿ ಮಾರಲು ಅವಕಾಶ ನೀಡಬೇಕು ಎಂದು ಆಗ್ರಹಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!