ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕರೋನಾ ಲಾಕ್ ಡೌನ್ ಜೂನ್ 21ಕ್ಕೆ ಮುಗಿಯುವುದುರ ಜೊತೆಗೆ ಇಂದಿನಿಂದ ಸೋಮವಾರ ಬೆಳಗ್ಗೆವರೆಗೂ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹೀಗಾಗಿ ವಾಹನಗಳ ಸಂಚಾರಕ್ಕೆ ಸಂಪೂರ್ಣ ನಿರ್ಬಂಧ ಹೇರಲಾಗಿದೆ.
ಶುಕ್ರವಾರ ಸಂಜೆ 7ಗಂಟೆಯಿಂದ ಸೋಮವಾರ ಬೆಳಗ್ಗೆ 6ಗಂಟೆಯ ತನಕ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿ ಇರಲಿದೆ. ಈ ವೇಳೆ ಅಗತ್ಯ ವಸ್ತುಗಳ ಸೇವೆಗೆ ಯಾವುದೇ ಸಮಸ್ಯೆಯಿಲ್ಲ. ಈಗಾಗ್ಲೇ ಲಾಕ್ ಡೌನ್ ನಲ್ಲಿ ಒಂದಿಷ್ಟು ಸಡಿಲಿಕೆ ಮಾಡಲಾಗಿದೆ. ಈಗ ಜೂನ್ 21ರಿಂದ ಸಂಪೂರ್ಣ ಅನ್ ಲಾಕ್ ಆಗುತ್ತಾ, ಇನ್ನು ಮುಂದುವರೆಸಲಾಗುತ್ತಾ ಅನ್ನೋ ಪ್ರಶ್ನೆ ಇದೆ.
ಜೂನ್ 21ರಿಂದ ಬಸ್ ಸೇವೆ ಆರಂಭವಾಗಲಿದೆ ಎನ್ನಲಾಗ್ತಿದೆ. ಶೇಕಡ 50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಿ ಬಸ್ ಸಂಚಾರ ಶುರುವಾಗಲಿದೆ ಎಂದು ಹೇಳಲಾಗ್ತಿದೆ. ಇನ್ನು ಕಳೆದ ಎರಡು ತಿಂಗಳುಗಳಿಂದ ಬಂದ್ ಆಗಿರುವ ಹಲವು ವ್ಯಾಪಾರ ವಹಿವಾಟುಗಳಿಗೆ ಅವಕಾಶ ಕಲ್ಪಿಸಲಾಗುತ್ತೆ ಅನ್ನೋದು ತಿಳಿದು ಬಂದಿದೆ. ಈ ಬಗ್ಗೆ ಸಿಎಂ ಯಡಿಯೂರಪ್ಪ ನಾಳೆಯೊಳಗೆ ಸರ್ಕಾರದ ನಿರ್ಧಾರದ ತಿಳಿಸುವ ಸಾಧ್ಯತೆಯಿದೆ.