ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಗ್ಗಿನವರೆಗೂ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದೆ. ಇದು ಅನ್ ಲಾಕ್ ಮಾಡಿರುವ ಜಿಲ್ಲೆಗಳಿಗೂ ಸಹ ಅನ್ವಯವಾಗುತ್ತೆ. ಹೀಗಾಗಿ ಅನಗತ್ಯವಾಗಿ ಓಡಾಟ ನಡೆಸುವವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳಲಿದ್ದಾರೆ.
ಅಗತ್ಯ ಸೇವೆಗಳಿಗೆ ಎಂದಿನಂತೆ ಅವಕಾಶ ನೀಡಲಾಗಿದೆ. ಆದ್ರೆ, ವಾಹನಗಳ ಓಡಾಟಕ್ಕೆ ಬ್ರೇಕ್ ಹಾಕಲಾಗಿದೆ. ಜನರು ಗುಂಪು ಗುಂಪಾಗಿ ಸೇರುವಂತಿಲ್ಲ. ದಿನಸಿ ಅಂಗಡಿ, ತರಕಾರಿ, ಹಾಲು ಮಾರಾಟಕ್ಕೆ ಅವಕಾಶವಿದೆ. ಹೋಟೆಲ್ ಗಳಲ್ಲಿ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಲಾಗಿದೆ.