ಪ್ರಜಾಸ್ತ್ರ ಸುದ್ದಿ
ಕೊಲ್ಕತ್ತಾ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಬಿಜೆಪಿ ನಡೆಸುತ್ತಿದ್ದ ಪ್ರತಿಭಟನೆ ಹಿಂಸಾರೂಪ ಪಡೆದುಕೊಂಡು, ಸಾಕಷ್ಟು ಅನಾಹುತ ಸೃಷ್ಟಿಸಿದೆ. ಇದೀಗ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋವೊಂದು ವೈರಲ್ ಆಗಿದ್ದು, ಓರ್ವ ಪೊಲೀಸ್ ಅಧಿಕಾರಿ ಮೇಲೆ ಹತ್ತಾರು ಬಿಜೆಪಿ ಕಾರ್ಯಕರ್ತರು ದೊಣ್ಣೆಗಳಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಪೊಲೀಸ್ ಅಧಿಕಾರಿಯನ್ನು ಅಟ್ಟಾಡಿಸಿಕೊಂಡು ಮನಸ್ಸಿಗೆ ಬಂದಂತೆ ಹೊಡೆಯುತ್ತಾರೆ. ಒಂದು ರೀತಿಯಲ್ಲಿ ಆತನನ್ನು ಕೊಲೆ ಮಾಡುವಷ್ಟರ ಮಟ್ಟಿಗೆ ಆತನ ಮೇಲೆ ಹಲ್ಲೆ ನಡೆಸಲಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿರುವ ವಿಡಿಯೋ ನೋಡಿದರೆ ಹಲ್ಲೆಯ ತೀವ್ರತೆ ಎಷ್ಟಿದೆ ಅನ್ನೋದು ತಿಳಿಯುತ್ತೆ.
ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿ ಪ್ರತಿಭಟನೆ ಮೆರವಣೆ ನಡೆಯಿಸಿತು. ಆಡಳಿತ ಭವನವಾದ ನಾಬಣ್ಣಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿತ್ತು. ಆದರೆ, ಇದನ್ನು ಪೊಲೀಸರು ತಡೆಯಲು ಯತ್ನಿಸಿದಾಗ ಹಿಂಸಾಚಾರ ಉಂಟಾಗಿದೆ.