ಪ್ರಜಾಸ್ತ್ರ ಸುದ್ದಿ
ಬೆಳಗಾವಿ: 18 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಬೆಳಗಾವಿ ವಿಭಜನೆ ಕುರಿತು ದಿನದಿಂದ ದಿನಕ್ಕೆ ಮಾತುಗಳು ಹೆಚ್ಚಿಗೆ ಕೇಳಿ ಬರುತ್ತಿವೆ. ಇದಕ್ಕೆ ಇಂದು ಪ್ರತಿಕ್ರಿಯೆ ನೀಡಿದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್, ಸದನದಲ್ಲಿ ಪ್ರಸ್ತಾಪ ಬಂದರೆ ಸಕಾರಾತ್ಮಕವಾಗಿ ಸ್ಪಂದಿಸುತ್ತೇವೆ ಎನ್ನುವ ಮೂಲಕ ಸಹಮತ ವ್ಯಕ್ತಪಡಿಸಿದ್ದಾರೆ.
ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಬೆಳಗಾವಿ ಜಿಲ್ಲೆ ವಿಭಜನೆ ಬಗ್ಗೆ ಮಾತುಗಳು ಕೇಳಿ ಬರುತ್ತಿವೆ. ಸದನದಲ್ಲಿ ಇದರ ಬಗ್ಗೆ ಚರ್ಚಿಸೋಣ. ಇನ್ನು ಭಾಗದ ಶಾಸಕರು ಉತ್ತರ ಕರ್ನಾಟಕ ವಿಷಯಗಳನ್ನು ಚರ್ಚೆಗೆ ತೆಗೆದುಕೊಂಡರೆ ಸರ್ಕಾರ ಸ್ಪಂದಿಸುತ್ತದೆ ಅಂತಾ ಹೇಳಿದರು.