ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದ ಸ್ಪರ್ಧೆ ಮಾಡಲಿದ್ದಾರೆ ಅನ್ನೋದರ ಬಗ್ಗೆ ಸಾಕಷ್ಟು ಚರ್ಚೆ ನಡೆಯುತ್ತಿದೆ. ಇದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದೆ.
ಕೋಲಾರಕ್ಕೆ ತೆರಳುವುದಕ್ಕೂ ಮೊದಲು ಮಾತನಾಡಿದ ಅವರು, ವರುಣಾ, ಬದಾಮಿ, ಚಾಮರಾಜಪೇಟೆ ಸೇರಿದಂತೆ ಹಲವು ಕಡೆಯಿಂದ ಸ್ಪರ್ಧಿಸುವಂತೆ ಜನರು ಒತ್ತಡ ಹಾಕುತ್ತಿದ್ದಾರೆ. ಆದರೆ, ಈ ಬಾರಿ ಕೋಲಾರದಿಂದ ಶ್ರೀನಿವಾಸಗೌಡ ಸ್ಪರ್ಧಿಸುತ್ತಿಲ್ಲ. ಹೀಗಾಗಿ ಸ್ಥಳೀಯ ನಾಯಕರು ಇಲ್ಲಿಂದ ಸ್ಪರ್ಧಿಸಿ ಎನ್ನುತ್ತಿದ್ದಾರೆ. ಅಲ್ಲಿನ ನಾಯಕರೊಂದಿಗೆ ಚರ್ಚಿಸಲು ಕೋಲಾರಕ್ಕೆ ಹೊರಟಿದ್ದು, ಚರ್ಚಿಸಿ ಅಂತಿಮ ತೀರ್ಮಾನ ತಗೆದುಕೊಳ್ಳುತ್ತೇನೆ ಎಂದರು.