ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಓಮಿಕ್ರಾನ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೈಟ್ ಕರ್ಫ್ಯೂ ಜೊತೆಗೆ ವೀಕೆಂಡ್ ಕರ್ಫ್ಯೂ ಜಾರಿಗೆ ತರಲಾಯಿತು. ಬೆಂಗಳೂರಿನಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಯಿತು. ಆದರೆ, ವೀಕೆಂಡ್ ಕರ್ಫ್ಯೂ ರದ್ದು ಮಾಡಲಾಗಿದೆ. ಶಿಕ್ಷಣ ಸಂಸ್ಥೆಗಳ ಕಥೆ ಏನು ಅನ್ನೋ ಪ್ರಶ್ನೆಗೂ ಉತ್ತರ ಸಿಕ್ಕಿದೆ.
ಶಾಲೆ, ಕಾಲೇಜು ಪ್ರಾರಂಭದ ಬಗ್ಗೆ ಮಾತನಾಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, ಬೆಂಗಳೂರು ಹೊರತು ಪಡಿಸಿ ಉಳಿದ ಎಲ್ಲ ಜಿಲ್ಲೆಗಳಲ್ಲಿ ಶಾಲೆಗಳು ಓಪನ್ ಇರುತ್ತೆ. ಜನವರಿ 29ರ ಸಭೆಯಲ್ಲಿ ಬೆಂಗಳೂರಿನಲ್ಲಿನ ಶಾಲೆಯ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಉಳಿದ ಜಿಲ್ಲೆಗಳಲ್ಲಿನ ಪಾಸಿಟಿವಿಟಿ ರೇಟ್ ನೋಡಿಕೊಂಡು ಶಾಲೆ ಬಂದ್ ಬಗ್ಗೆ ಸ್ಥಳೀಯ ಅಧಿಕಾರಿಗಳು ನಿರ್ಧರಿಸಲಿದ್ದಾರೆ. ಒಂದೇ ಶಾಲೆಯಲ್ಲಿ 5 ಮಕ್ಕಳಲ್ಲಿ ಸೋಂಕು ಪತ್ತೆಯಾದರೆ 3 ದಿನ ಶಾಲೆ ಬಂದ್, 25-30 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡರೆ ಒಂದು ವಾರ ಶಾಲೆ ಬಂದ್ ಎಂದು ತಿಳಿಸಿದ್ದಾರೆ.